July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಇಬ್ಬರಲ್ಲಿನ ಕೊಡುಕೊಳ್ಳುವ ಲೆಕ್ಕಾಚಾರ ಕಡಿಮೆಯಾಗಿ ಈಶ್ವರನತ್ತ ಪ್ರಯಾಣಿಸುವ ಅವಕಾಶವನ್ನು ಒದಗಿಸುತ್ತದೆ. ಹಾಗೂ ಈ ಹಬ್ಬವು ಇಬ್ಬಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ. ಇದರಿಂದ ಕುಟುಂಬದಲ್ಲಿರುವ ಕಲಹ ಶಾಂತವಾಗುತ್ತದೆ. ಮನಸ್ತಾಪ ದೂರವಾಗುತ್ತದೆ ಮತ್ತು ಸಾಮೂಹಿಕ ಸಂಕಲ್ಪ ಶಕ್ತಿ ಕಾರ್ಯಗತವಾಗುತ್ತದೆ. ಈ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ಸಹೋದರರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.

ಈ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ, ಪತ್ರಕರ್ತರಿಗೆ, ಹಿಂದುತ್ವನಿಷ್ಠರಿಗೆ ಹಾಗೂ ಧರ್ಮಪ್ರೇಮಿಗಳಿಗೆ ರಾಕಿ ಕಟ್ಟುವ ಮೂಲಕ ರಕ್ಷಾಬಂಧನದ ಶುಭಾಶಯವನ್ನು ಹೇಳಲಾಯಿತು.

Related posts

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya
error: Content is protected !!