September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ:: ಆರನೇ ತರಗತಿಯಿಂದ 9ನೇ ತರಗತಿ ವರೆಗೆ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಬಗ್ಗೆ ಆಸಕ್ತಿ ಮೂಡಿಸುವುದಕ್ಕಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅಂಚೆ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.


ಅರ್ಜಿಯನ್ನು ಇದೆ ಸೆಪ್ಟೆಂಬರ್ 3ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574201 ಇವರಿಗೆ ತ್ವರಿತ ಅಂಚೆ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.


ಕಳೆದ ಬಾರಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 60 ಕ್ಕಿಂತ ಅಧಿಕ ಅಂಕಗಳನ್ನು ಪಡೆದವರು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಛೇರಿಯಿಂದ ಪಡೆಯಬಹುದು ಎಂದು ಅಂಚೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Related posts

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya
error: Content is protected !!