29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಎಂಬ ವಿಷಯದ ಬಗ್ಗೆ ಎರಡು ದಿನಗಳ ಸಾಂಸ್ಥಿಕ ತರಬೇತಿಯನ್ನು ಆ. 21 22, ರಂದು ಪೂರ್ವಾಹ್ನ 10 ಘಂಟೆಯಿಂದ ಸಂಜೆ 5 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಶ್ಯಾಮ್ ಸುಂದರ ಭಟ್, ಪ್ರಗತಿಪರ ಜೇನು ಉದ್ದಿಮೆದಾರರು, ಮಧುಮಕ್ಷಿಕ, ಅಲ್ಲಡ್ಕ ಬೆಳ್ತಂಗಡಿ ಮತ್ತು ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಮೊಬೈಲ್ ತಂತ್ರಾಂಶವನ್ನು ಬಳಸುವ ಬಗ್ಗೆ ಮಾಹಿತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ರೈತ ಬಾಂಧವರಿಗೆ ಟೀ/ಕಾಫಿ, ಊಟದ ವ್ಯವಸ್ಥೆ ಇರುತ್ತದೆ. ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್ ಐ ಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!