38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

ಬೆಳಾಲು: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಶ್ರೀಮಠದ ಶಾಖೆ ಭಟ್ಕಳದ ಕರಿಕಲ್ಲಿನಲ್ಲಿ ಜರಗುತ್ತಿದೆ. ಈ ಸಂದರ್ಭದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಪೂಜ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದು ಈ ಸಂದರ್ಭದಲ್ಲಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ಮತ್ತು ಫಲತಾಂಬೂಲವನ್ನಿತ್ತು ಸ್ವಾಮೀಜಿಯವರು ಸನ್ಮಾನಿಸಿ ಗೌರವ ಸಲ್ಲಿಸಿದರು.

ಇವರು ಕಳೆದ 23 ವರ್ಷಗಳಿಂದ ಬೆಳಾಲು ಪ್ರೌಢಶಾಲೆಯಲ್ಲಿ ಸಾರ್ಥಕ ಶಿಕ್ಷಕ ಸೇವೆಯನ್ನು ಸಲ್ಲಿಸಿರುತ್ತಾರೆ ಎಂದು ಅಭಿನಂದಿಸಿ ಹರಸಿದರು. ಇವರ ಜೊತೆಗೆ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ದಯಾನಂದ ಪಿ ಬೆಳಾಲುರವರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!