25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

ಬೆಳಾಲು: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಶ್ರೀಮಠದ ಶಾಖೆ ಭಟ್ಕಳದ ಕರಿಕಲ್ಲಿನಲ್ಲಿ ಜರಗುತ್ತಿದೆ. ಈ ಸಂದರ್ಭದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಪೂಜ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದು ಈ ಸಂದರ್ಭದಲ್ಲಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ಮತ್ತು ಫಲತಾಂಬೂಲವನ್ನಿತ್ತು ಸ್ವಾಮೀಜಿಯವರು ಸನ್ಮಾನಿಸಿ ಗೌರವ ಸಲ್ಲಿಸಿದರು.

ಇವರು ಕಳೆದ 23 ವರ್ಷಗಳಿಂದ ಬೆಳಾಲು ಪ್ರೌಢಶಾಲೆಯಲ್ಲಿ ಸಾರ್ಥಕ ಶಿಕ್ಷಕ ಸೇವೆಯನ್ನು ಸಲ್ಲಿಸಿರುತ್ತಾರೆ ಎಂದು ಅಭಿನಂದಿಸಿ ಹರಸಿದರು. ಇವರ ಜೊತೆಗೆ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ದಯಾನಂದ ಪಿ ಬೆಳಾಲುರವರು ಉಪಸ್ಥಿತರಿದ್ದರು.

Related posts

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!