24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

ಕುಂಟಾಲಪಳಿಕೆ: ಸಮನ್ವಿ ಕಿಶೋರಿ ಸಂಘದ ಉದ್ಘಾಟನೆಯನ್ನು ಪೆರ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಉಷಾ.ವಿ. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ದೀಪ ಬೆಳಗುವ ಮೂಲಕ ನೆರವೇರಿಸಿದರು.

ಮೇಘಶ್ರೀ ಹಾಗೂ ರೂಪಶ್ರೀ ಇವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು . ಆರೋಗ್ಯ ಕಾರ್ಯಕರ್ತೆ ರೇಖಾ ಹದಿಹರೆಯಾದ ಮಕ್ಕಳ ಶಾರೀರಿಕ, ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆ ಹೆತ್ತವರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷರಾದ ಲಿಖಿತ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀಮತಿ ದಿವ್ಯಜೋತಿ, ಶ್ರೀಮತಿ ವಿಮಲ ಆರ್ ಶೆಟ್ಟಿ, ಆಶಾ ಕಾರ್ಯಕರ್ತೆ ಶ್ರೀಮತಿ ಕವಿತಾ, ಕುಂಟಾಲಪಳಿಕೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯ ಪ್ರಭಾ. ಎಸ್, ಉಪಸ್ಥಿತರಿದ್ದರು.

ತಾಯಂದಿರು, ಕಿಶೋರಿಯರು, ಹಾಜರಿದ್ದು ಕಾರ್ಯಕ್ರಮದಲ್ಲಿ ಸುಶ್ಮಿತಾ ಸ್ವಾಗತಿಸಿ, ಸುಮ ವಂದಿಸಿದರು. ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಾದ ಅವನಿ, ಭೂಮಿಕಾ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

Related posts

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya
error: Content is protected !!