37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಕೊಯ್ಯೂರು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.20 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಯಾಮಣಿ ರವರ ಅಧ್ಯಕ್ಷತೆಯಲ್ಲಿ ಪಂಚದುರ್ಗಾ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆ, ವಲಯ ಅರಣ್ಯಾಧಿಕಾರಿ ರವಿಕುಮಾರ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಕೊಯ್ಯೂರು 4ನೇ ವಾರ್ಡ್ ಬಜಿಲ ಶಾಲೆಗೆ ಎಷ್ಟು ಅನುದಾನ ಇಟ್ಟಿದೀರಿ? ಶಾಲೆ ಬೀಳುವ ಹಂತದಲ್ಲಿದೆ ಎಂದು ಗ್ರಾಮಸ್ಥರು ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಗೆ ಪ್ರಶ್ನಿಸಿದರು.

ಗ್ರಾಮ ಪಂಚಾಯತ್ ವತಿಯಿಂದ ಕೊಯ್ಯೂರು ಸಾಂತ್ಯೋಡಿಯಲ್ಲಿ ಉತ್ತಮವಾದ ಬಸ್ಸ್ಟ್ಯಾಂಡ್ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರಾದ ರಮೇಶ್ ಪಂಚಾಯತ್ ಗೆ ಅಭಿನಂದಿಸಿದರು. ಗ್ರಾಮಸ್ಥರಾದ ಸಿದ್ದೀಕ್, ಕಳೆದ ಕೆಲ ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆಯ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಪ್ರಶಂಸಿಸಿದರು.

ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಹರೀಶ್, ಸದಸ್ಯರಾದ ಜಗನ್ನಾಥ, ದಿವ್ಯ, ಗಿರೀಶ, ಯಶವಂತ, ಶಾರದಾ, ವಿಶಾಲಾಕ್ಷಿ, ಲೋಕೇಶ, ಹೇಮಾವತಿ, ಇಸುಬು, ಕೆ. ಚಂದ್ರಾವತಿ, ಸುಮಿತಾ ವಿವಿಧ ಹಾಗೂ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿದರು. ಕಾರ್ಯದರ್ಶಿ ಪರಮೇಶ್ವರ ಜಮಾಖರ್ಚು ಮಂಡಿಸಿದರು. ಪಂ. ಸದಸ್ಯ ಯಶವಂತ ಗೌಡ ಧನ್ಯವಾದವಿತ್ತರು.

Related posts

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya
error: Content is protected !!