22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ: ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 20 ರಂದು ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆಯಲ್ಲಿ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮತ್ತು ಮೌನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ, ಪ್ರತಿಭಟನೆಗೆ ಶಕ್ತಿ ತುಂಬಿದರು. ನಂತರ ವಿದ್ಯಾರ್ಥಿಗಳೆಲ್ಲರೂ ಎರಡು ನಿಮಿಷದ ಮೌನಚರಣೆ ಆಚರಿಸಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಕೋರಿದರು. ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲಾ ಸರ್ಕಾರಗಳೂ ಪ್ರಥಮ ಆದ್ಯತೆ ನೀಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಒಕ್ಕೊರಲಿನಿಂದ ಆಗ್ರಹಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಕೋಶಾಧಿಕಾರಿಗಳಾದ ಎಂಕೆ ಕಾಶಿನಾಥ್ ರವರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡರವರು ನೆರವೇರಿಸಿದರು.

Related posts

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!