25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ: ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 20 ರಂದು ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆಯಲ್ಲಿ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮತ್ತು ಮೌನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ, ಪ್ರತಿಭಟನೆಗೆ ಶಕ್ತಿ ತುಂಬಿದರು. ನಂತರ ವಿದ್ಯಾರ್ಥಿಗಳೆಲ್ಲರೂ ಎರಡು ನಿಮಿಷದ ಮೌನಚರಣೆ ಆಚರಿಸಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಕೋರಿದರು. ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲಾ ಸರ್ಕಾರಗಳೂ ಪ್ರಥಮ ಆದ್ಯತೆ ನೀಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಒಕ್ಕೊರಲಿನಿಂದ ಆಗ್ರಹಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಕೋಶಾಧಿಕಾರಿಗಳಾದ ಎಂಕೆ ಕಾಶಿನಾಥ್ ರವರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡರವರು ನೆರವೇರಿಸಿದರು.

Related posts

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya
error: Content is protected !!