25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು.


ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ ಉದ್ಘಾಟಿಸಿ ಮಾತನಾಡಿದರು. ಸಂಗೀತ ಮತ್ತು ಭರತನಾಟ್ಯಗಳೆರಡೂ ಒಂದೇ ಗಾಡಿಯ ಎರಡು ಚಕ್ರಗಳಿದ್ದಂತೆ. ಸಂಗೀತವು ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸುವುದರ ಜೊತೆಗೆ ರಾಗಬದ್ಧವಾಗಿ ಹಾಡುವುದರಿಂದ ಭಗವಂತನ ಸ್ತುತಿ ಮಾಡಿ ನೆಮ್ಮದಿಯನ್ನು ಕಂಡುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಶ್ರೀಮತಿ ಉಮಾ ಶಂಕರನಾರಾಯಣ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಗ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಶ್ರೀಪ್ರಿಯಾ ಪರಕ್ಕಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರತಿ ಭಾನುವಾರ ಈ ತರಬೇತಿಯು ಮುಂದುವರೆಯುವುದಾಗಿ ತಿಳಿಸಿದರು.


ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ತರಬೇತಿ ನಡೆಯಿತು.

Related posts

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!