23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು.


ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ ಉದ್ಘಾಟಿಸಿ ಮಾತನಾಡಿದರು. ಸಂಗೀತ ಮತ್ತು ಭರತನಾಟ್ಯಗಳೆರಡೂ ಒಂದೇ ಗಾಡಿಯ ಎರಡು ಚಕ್ರಗಳಿದ್ದಂತೆ. ಸಂಗೀತವು ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸುವುದರ ಜೊತೆಗೆ ರಾಗಬದ್ಧವಾಗಿ ಹಾಡುವುದರಿಂದ ಭಗವಂತನ ಸ್ತುತಿ ಮಾಡಿ ನೆಮ್ಮದಿಯನ್ನು ಕಂಡುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಶ್ರೀಮತಿ ಉಮಾ ಶಂಕರನಾರಾಯಣ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಗ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಶ್ರೀಪ್ರಿಯಾ ಪರಕ್ಕಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರತಿ ಭಾನುವಾರ ಈ ತರಬೇತಿಯು ಮುಂದುವರೆಯುವುದಾಗಿ ತಿಳಿಸಿದರು.


ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ತರಬೇತಿ ನಡೆಯಿತು.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya
error: Content is protected !!