25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ

ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು, ಕುಕ್ಕಾವು ಸೇತುವೆ, ಬೊಳ್ಳಾಜೆ ಮೋರಿ ಕುಸಿತ ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಆ. 20ರಂದು ಭೇಟಿ ಸೂಕ್ತ ಪರಿಹಾರ ಒದಗಿಸುವಂತೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯ ಗೌಡ, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya
error: Content is protected !!