23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು.


ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ರಸ್ತೆಗಳ ಇಕ್ಕೆಲಗಳಲ್ಲಿ ಮಣ್ಣು ಜರಿದು ಬಿದ್ದಿರುವುದು ಹಾಗೂ ಕಿರಿದಾದ ರಸ್ತೆಗಳಿಂದಾಗಿ ಈ ಸಮಸ್ಯೆ ಉಂಟಾಗಿತ್ತು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬಿ. ಜಾಗದ ಮಾಲೀಕರೊಡನೆ ಮಾತುಕತೆ ನಡೆಸಿ ರಸ್ತೆಗಳನ್ನು ಅಗಲ ಮಾಡಲು ಒಪ್ಪಿಸಿ ಸ್ಥಳೀಯರೇ ರಿಪೇರಿ ಮಾಡಿಕೊಳ್ಳುವಂತೆ ಮಾತುಕತೆ ನಡೆಸುವುದರ ಮೂಲಕ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ,. ಅಧ್ಯಕ್ಷೆ ಶ್ರೀಮತಿ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!