25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು.


ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ರಸ್ತೆಗಳ ಇಕ್ಕೆಲಗಳಲ್ಲಿ ಮಣ್ಣು ಜರಿದು ಬಿದ್ದಿರುವುದು ಹಾಗೂ ಕಿರಿದಾದ ರಸ್ತೆಗಳಿಂದಾಗಿ ಈ ಸಮಸ್ಯೆ ಉಂಟಾಗಿತ್ತು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬಿ. ಜಾಗದ ಮಾಲೀಕರೊಡನೆ ಮಾತುಕತೆ ನಡೆಸಿ ರಸ್ತೆಗಳನ್ನು ಅಗಲ ಮಾಡಲು ಒಪ್ಪಿಸಿ ಸ್ಥಳೀಯರೇ ರಿಪೇರಿ ಮಾಡಿಕೊಳ್ಳುವಂತೆ ಮಾತುಕತೆ ನಡೆಸುವುದರ ಮೂಲಕ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ,. ಅಧ್ಯಕ್ಷೆ ಶ್ರೀಮತಿ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!