July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು.


ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ರಸ್ತೆಗಳ ಇಕ್ಕೆಲಗಳಲ್ಲಿ ಮಣ್ಣು ಜರಿದು ಬಿದ್ದಿರುವುದು ಹಾಗೂ ಕಿರಿದಾದ ರಸ್ತೆಗಳಿಂದಾಗಿ ಈ ಸಮಸ್ಯೆ ಉಂಟಾಗಿತ್ತು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬಿ. ಜಾಗದ ಮಾಲೀಕರೊಡನೆ ಮಾತುಕತೆ ನಡೆಸಿ ರಸ್ತೆಗಳನ್ನು ಅಗಲ ಮಾಡಲು ಒಪ್ಪಿಸಿ ಸ್ಥಳೀಯರೇ ರಿಪೇರಿ ಮಾಡಿಕೊಳ್ಳುವಂತೆ ಮಾತುಕತೆ ನಡೆಸುವುದರ ಮೂಲಕ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ,. ಅಧ್ಯಕ್ಷೆ ಶ್ರೀಮತಿ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya
error: Content is protected !!