23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಇಬ್ಬರಲ್ಲಿನ ಕೊಡುಕೊಳ್ಳುವ ಲೆಕ್ಕಾಚಾರ ಕಡಿಮೆಯಾಗಿ ಈಶ್ವರನತ್ತ ಪ್ರಯಾಣಿಸುವ ಅವಕಾಶವನ್ನು ಒದಗಿಸುತ್ತದೆ. ಹಾಗೂ ಈ ಹಬ್ಬವು ಇಬ್ಬಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ. ಇದರಿಂದ ಕುಟುಂಬದಲ್ಲಿರುವ ಕಲಹ ಶಾಂತವಾಗುತ್ತದೆ. ಮನಸ್ತಾಪ ದೂರವಾಗುತ್ತದೆ ಮತ್ತು ಸಾಮೂಹಿಕ ಸಂಕಲ್ಪ ಶಕ್ತಿ ಕಾರ್ಯಗತವಾಗುತ್ತದೆ. ಈ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ಸಹೋದರರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.

ಈ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ, ಪತ್ರಕರ್ತರಿಗೆ, ಹಿಂದುತ್ವನಿಷ್ಠರಿಗೆ ಹಾಗೂ ಧರ್ಮಪ್ರೇಮಿಗಳಿಗೆ ರಾಕಿ ಕಟ್ಟುವ ಮೂಲಕ ರಕ್ಷಾಬಂಧನದ ಶುಭಾಶಯವನ್ನು ಹೇಳಲಾಯಿತು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!