23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಇಬ್ಬರಲ್ಲಿನ ಕೊಡುಕೊಳ್ಳುವ ಲೆಕ್ಕಾಚಾರ ಕಡಿಮೆಯಾಗಿ ಈಶ್ವರನತ್ತ ಪ್ರಯಾಣಿಸುವ ಅವಕಾಶವನ್ನು ಒದಗಿಸುತ್ತದೆ. ಹಾಗೂ ಈ ಹಬ್ಬವು ಇಬ್ಬಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ. ಇದರಿಂದ ಕುಟುಂಬದಲ್ಲಿರುವ ಕಲಹ ಶಾಂತವಾಗುತ್ತದೆ. ಮನಸ್ತಾಪ ದೂರವಾಗುತ್ತದೆ ಮತ್ತು ಸಾಮೂಹಿಕ ಸಂಕಲ್ಪ ಶಕ್ತಿ ಕಾರ್ಯಗತವಾಗುತ್ತದೆ. ಈ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ಸಹೋದರರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.

ಈ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ, ಪತ್ರಕರ್ತರಿಗೆ, ಹಿಂದುತ್ವನಿಷ್ಠರಿಗೆ ಹಾಗೂ ಧರ್ಮಪ್ರೇಮಿಗಳಿಗೆ ರಾಕಿ ಕಟ್ಟುವ ಮೂಲಕ ರಕ್ಷಾಬಂಧನದ ಶುಭಾಶಯವನ್ನು ಹೇಳಲಾಯಿತು.

Related posts

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!