24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಇಬ್ಬರಲ್ಲಿನ ಕೊಡುಕೊಳ್ಳುವ ಲೆಕ್ಕಾಚಾರ ಕಡಿಮೆಯಾಗಿ ಈಶ್ವರನತ್ತ ಪ್ರಯಾಣಿಸುವ ಅವಕಾಶವನ್ನು ಒದಗಿಸುತ್ತದೆ. ಹಾಗೂ ಈ ಹಬ್ಬವು ಇಬ್ಬಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ. ಇದರಿಂದ ಕುಟುಂಬದಲ್ಲಿರುವ ಕಲಹ ಶಾಂತವಾಗುತ್ತದೆ. ಮನಸ್ತಾಪ ದೂರವಾಗುತ್ತದೆ ಮತ್ತು ಸಾಮೂಹಿಕ ಸಂಕಲ್ಪ ಶಕ್ತಿ ಕಾರ್ಯಗತವಾಗುತ್ತದೆ. ಈ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ಸಹೋದರರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.

ಈ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ, ಪತ್ರಕರ್ತರಿಗೆ, ಹಿಂದುತ್ವನಿಷ್ಠರಿಗೆ ಹಾಗೂ ಧರ್ಮಪ್ರೇಮಿಗಳಿಗೆ ರಾಕಿ ಕಟ್ಟುವ ಮೂಲಕ ರಕ್ಷಾಬಂಧನದ ಶುಭಾಶಯವನ್ನು ಹೇಳಲಾಯಿತು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!