22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ


ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ತಮ್ಮ ಅನುಭವದ  ಪರಿಪಕ್ವತೆಯೊಂದಿಗೆ ನಿವೃತ್ತರು ಸಮಾಜಸೇವೆಯಲ್ಲಿ ಪ್ರವೃತ್ತರಾಗಬೇಕು ಎಂದು ಉಜಿರೆಯ ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು.


ಅವರು ಆ.20 ರಂದು ಉಜಿರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ಉದ್ಘಾಟಿಸಿ, ಮನವಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.


ಪ್ರತಿಯೊಬ್ಬರ ಜೀವನದಲ್ಲಿಯೂ ನಿವೃತ್ತಿ ಒಂದು ಅನಿವಾರ್ಯ ಹಂತವಾಗಿದ್ದು ನಿವೃತ್ತರು ತಾಳ್ಮೆ ,ಪ್ರೀತಿ-ವಿಶ್ವಾಸ ಹಾಗೂ ಮಾನಸಿಕ ಪರಿಪಕ್ವತೆಯೊಂದಿಗೆ ಆರೋಗ್ಯಪೂರ್ಣ ಜೀವನ ನಡೆಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ ಟಿ. ಕೃಷ್ಣಮೂರ್ತಿ ಮತ್ತು ಪ್ರೊ. ಎ. ಜಯಕುಮಾರ್ ಶೆಟ್ಟಿ ಹಾಗೂ ವೇಣೂರಿನ ಶೀಲಾ ಎಸ್. ಹೆಗ್ಡೆ ಶುಭಾಶಂಸನೆೆ ಮಾಡಿದರು.


ಅಧ್ಯಕ್ಷತೆ ವಹಿಸಿದ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲಶೆಟ್ಟಿ ಮಾತನಾಡಿ, ನಿವೃತ್ತರು ವೃದ್ಧರಲ್ಲ, ಪ್ರಬುದ್ದರು. ಕಿರಿಯರಿಗೆ ಸಕಾಲಿಕ ಮಾಹಿತಿ, ಮಾರ್ಗದರ್ಶನ ನೀಡಬೇಕು. ಪ್ರತಿಯೊಬ್ಬ ಸದಸ್ಯರೂ ಸಂಘಟನೆ ಬಗ್ಗೆ ಅಭಿಮಾನ ಮತ್ತು ಆಸಕ್ತಿಯಿಂದ ಸೇವೆ ಮಾಡಬೇಕು ಎಂದು ಹೇಳಿದರು.


ಎಲ್ಲಾ ವಿಭಾಗಸಂಘಟಕರು ಮತ್ತು ಹೊಸ ಸದಸ್ಯರನ್ನು ಗೌರವಿಸಲಾಯಿತು.
ಸನ್ಮತ್ ಕುಮಾರ್ ನಾರಾವಿ ಪ್ರಾಸ್ತ್ತಾವಿಕವಾಗಿ ಮಾತನಾಡಿದರು.
 ಬಿ ಸೋಮಶೇಖರ್ ಶೆಟ್ಟಿ ಸ್ವಾಗತಿಸಿದರು. ವಿಶ್ವಾಸ ರಾವ್ ಧನ್ಯವಾದವಿತ್ತರು. ವಸಂತ ರಾವ್ ನಾರಾವಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya
error: Content is protected !!