32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

ಕುಂಟಾಲಪಳಿಕೆ: ಸಮನ್ವಿ ಕಿಶೋರಿ ಸಂಘದ ಉದ್ಘಾಟನೆಯನ್ನು ಪೆರ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಉಷಾ.ವಿ. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ದೀಪ ಬೆಳಗುವ ಮೂಲಕ ನೆರವೇರಿಸಿದರು.

ಮೇಘಶ್ರೀ ಹಾಗೂ ರೂಪಶ್ರೀ ಇವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು . ಆರೋಗ್ಯ ಕಾರ್ಯಕರ್ತೆ ರೇಖಾ ಹದಿಹರೆಯಾದ ಮಕ್ಕಳ ಶಾರೀರಿಕ, ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆ ಹೆತ್ತವರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷರಾದ ಲಿಖಿತ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀಮತಿ ದಿವ್ಯಜೋತಿ, ಶ್ರೀಮತಿ ವಿಮಲ ಆರ್ ಶೆಟ್ಟಿ, ಆಶಾ ಕಾರ್ಯಕರ್ತೆ ಶ್ರೀಮತಿ ಕವಿತಾ, ಕುಂಟಾಲಪಳಿಕೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯ ಪ್ರಭಾ. ಎಸ್, ಉಪಸ್ಥಿತರಿದ್ದರು.

ತಾಯಂದಿರು, ಕಿಶೋರಿಯರು, ಹಾಜರಿದ್ದು ಕಾರ್ಯಕ್ರಮದಲ್ಲಿ ಸುಶ್ಮಿತಾ ಸ್ವಾಗತಿಸಿ, ಸುಮ ವಂದಿಸಿದರು. ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಾದ ಅವನಿ, ಭೂಮಿಕಾ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

Related posts

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya
error: Content is protected !!