July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ: ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 20 ರಂದು ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆಯಲ್ಲಿ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮತ್ತು ಮೌನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ, ಪ್ರತಿಭಟನೆಗೆ ಶಕ್ತಿ ತುಂಬಿದರು. ನಂತರ ವಿದ್ಯಾರ್ಥಿಗಳೆಲ್ಲರೂ ಎರಡು ನಿಮಿಷದ ಮೌನಚರಣೆ ಆಚರಿಸಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಕೋರಿದರು. ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲಾ ಸರ್ಕಾರಗಳೂ ಪ್ರಥಮ ಆದ್ಯತೆ ನೀಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಒಕ್ಕೊರಲಿನಿಂದ ಆಗ್ರಹಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಕೋಶಾಧಿಕಾರಿಗಳಾದ ಎಂಕೆ ಕಾಶಿನಾಥ್ ರವರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡರವರು ನೆರವೇರಿಸಿದರು.

Related posts

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya
error: Content is protected !!