September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು.


ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ ಉದ್ಘಾಟಿಸಿ ಮಾತನಾಡಿದರು. ಸಂಗೀತ ಮತ್ತು ಭರತನಾಟ್ಯಗಳೆರಡೂ ಒಂದೇ ಗಾಡಿಯ ಎರಡು ಚಕ್ರಗಳಿದ್ದಂತೆ. ಸಂಗೀತವು ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸುವುದರ ಜೊತೆಗೆ ರಾಗಬದ್ಧವಾಗಿ ಹಾಡುವುದರಿಂದ ಭಗವಂತನ ಸ್ತುತಿ ಮಾಡಿ ನೆಮ್ಮದಿಯನ್ನು ಕಂಡುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಶ್ರೀಮತಿ ಉಮಾ ಶಂಕರನಾರಾಯಣ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಗ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಶ್ರೀಪ್ರಿಯಾ ಪರಕ್ಕಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರತಿ ಭಾನುವಾರ ಈ ತರಬೇತಿಯು ಮುಂದುವರೆಯುವುದಾಗಿ ತಿಳಿಸಿದರು.


ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ತರಬೇತಿ ನಡೆಯಿತು.

Related posts

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸರಿಯಲ್ಲ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya
error: Content is protected !!