25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು.


ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ ಉದ್ಘಾಟಿಸಿ ಮಾತನಾಡಿದರು. ಸಂಗೀತ ಮತ್ತು ಭರತನಾಟ್ಯಗಳೆರಡೂ ಒಂದೇ ಗಾಡಿಯ ಎರಡು ಚಕ್ರಗಳಿದ್ದಂತೆ. ಸಂಗೀತವು ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸುವುದರ ಜೊತೆಗೆ ರಾಗಬದ್ಧವಾಗಿ ಹಾಡುವುದರಿಂದ ಭಗವಂತನ ಸ್ತುತಿ ಮಾಡಿ ನೆಮ್ಮದಿಯನ್ನು ಕಂಡುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಶ್ರೀಮತಿ ಉಮಾ ಶಂಕರನಾರಾಯಣ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಗ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಶ್ರೀಪ್ರಿಯಾ ಪರಕ್ಕಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರತಿ ಭಾನುವಾರ ಈ ತರಬೇತಿಯು ಮುಂದುವರೆಯುವುದಾಗಿ ತಿಳಿಸಿದರು.


ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ತರಬೇತಿ ನಡೆಯಿತು.

Related posts

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!