July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು.


ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ ಉದ್ಘಾಟಿಸಿ ಮಾತನಾಡಿದರು. ಸಂಗೀತ ಮತ್ತು ಭರತನಾಟ್ಯಗಳೆರಡೂ ಒಂದೇ ಗಾಡಿಯ ಎರಡು ಚಕ್ರಗಳಿದ್ದಂತೆ. ಸಂಗೀತವು ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸುವುದರ ಜೊತೆಗೆ ರಾಗಬದ್ಧವಾಗಿ ಹಾಡುವುದರಿಂದ ಭಗವಂತನ ಸ್ತುತಿ ಮಾಡಿ ನೆಮ್ಮದಿಯನ್ನು ಕಂಡುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಶ್ರೀಮತಿ ಉಮಾ ಶಂಕರನಾರಾಯಣ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಗ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಶ್ರೀಪ್ರಿಯಾ ಪರಕ್ಕಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರತಿ ಭಾನುವಾರ ಈ ತರಬೇತಿಯು ಮುಂದುವರೆಯುವುದಾಗಿ ತಿಳಿಸಿದರು.


ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ತರಬೇತಿ ನಡೆಯಿತು.

Related posts

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya
error: Content is protected !!