25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ

ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ ಮನೆಗೆ, ಕಜಕೆ ಶಾಲೆ, ಪಂಚಾಯತ್, ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ತಡೆಗೋಡೆ ಹಾನಿ ಸ್ಥಳ, ರಾಜಪ್ಪ ಗೌಡರ ಮನೆ, ಮಿತ್ತಬಾಗಿಲು ಗುತ್ತು ಮನೆಯ ತೋಟಕ್ಕೆ ಹಾನಿ, ಕೂಡಬೆಟ್ಟು ಸದಾಶಿವ ದೇವಸ್ಥಾನ, ಪಿಲತ್ತಡಿ ದಡ್ಡು, ಕುಕ್ಕಾವು ಸೇತುವೆ, ಬೊಳ್ಳಾಜೆ ಮೋರಿ ಕುಸಿತ ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಆ. 20ರಂದು ಭೇಟಿ ಸೂಕ್ತ ಪರಿಹಾರ ಒದಗಿಸುವಂತೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯ ಗೌಡ, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya
error: Content is protected !!