July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು.


ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ರಸ್ತೆಗಳ ಇಕ್ಕೆಲಗಳಲ್ಲಿ ಮಣ್ಣು ಜರಿದು ಬಿದ್ದಿರುವುದು ಹಾಗೂ ಕಿರಿದಾದ ರಸ್ತೆಗಳಿಂದಾಗಿ ಈ ಸಮಸ್ಯೆ ಉಂಟಾಗಿತ್ತು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬಿ. ಜಾಗದ ಮಾಲೀಕರೊಡನೆ ಮಾತುಕತೆ ನಡೆಸಿ ರಸ್ತೆಗಳನ್ನು ಅಗಲ ಮಾಡಲು ಒಪ್ಪಿಸಿ ಸ್ಥಳೀಯರೇ ರಿಪೇರಿ ಮಾಡಿಕೊಳ್ಳುವಂತೆ ಮಾತುಕತೆ ನಡೆಸುವುದರ ಮೂಲಕ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ,. ಅಧ್ಯಕ್ಷೆ ಶ್ರೀಮತಿ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!