September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು.


ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ರಸ್ತೆಗಳ ಇಕ್ಕೆಲಗಳಲ್ಲಿ ಮಣ್ಣು ಜರಿದು ಬಿದ್ದಿರುವುದು ಹಾಗೂ ಕಿರಿದಾದ ರಸ್ತೆಗಳಿಂದಾಗಿ ಈ ಸಮಸ್ಯೆ ಉಂಟಾಗಿತ್ತು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬಿ. ಜಾಗದ ಮಾಲೀಕರೊಡನೆ ಮಾತುಕತೆ ನಡೆಸಿ ರಸ್ತೆಗಳನ್ನು ಅಗಲ ಮಾಡಲು ಒಪ್ಪಿಸಿ ಸ್ಥಳೀಯರೇ ರಿಪೇರಿ ಮಾಡಿಕೊಳ್ಳುವಂತೆ ಮಾತುಕತೆ ನಡೆಸುವುದರ ಮೂಲಕ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ,. ಅಧ್ಯಕ್ಷೆ ಶ್ರೀಮತಿ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya
error: Content is protected !!