September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

ನಡ: ಆಟೋ ಚಾಲಕರ ಮತ್ತು ಮಾಲಕರ ಸಂಘ ಸುರ್ಯ, ಉಜಿರೆ ಇವರ ವತಿಯಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ ಆ.18 ರಂದು ಸುರ್ಯ ದೇವಸ್ಥಾನದ ವಠಾರದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಪ್ರಭಾಕರ ಮಯ್ಯ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಗೌಡ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸ.ಪ್ರದರ್ಜೆ, ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಟಿ.ಕೆ. ಶರತ್ ಕುಮಾರ್ ಮಂಚಿಬೆಟ್ಟು ಉಜಿರೆ, ,ಸುರ್ಯ ಸ.ಕಿ.ಪ್ರಾ.ಶಾಲೆ, ಮುಖ್ಯೋಪಾಧ್ಯಾಯರು ಶ್ರೀಮತಿ ಜಯ, ಸುರ್ಯ ಸ.ಕಿ.ಪ್ರಾ.ಶಾಲೆ ಸಹಶಿಕ್ಷಕಿ ಶ್ರೀಮತಿ ಶೋಭಾ, ಸುರ್ಯ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗೀತಾ ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರರು ಡಾ। ಸತೀಶ್ಚಂದ್ರ ಸುರ್ಯಗುತ್ತು, ಭಾರತೀಯ ಮಜ್ದೂರು ಸಂಘ ಪ್ರಧಾನ ಕಾರ್ಯದಶಿ೯ ಜಯರಾಜ ಸಾಲಿಯಾನ್ , ಸುರ್ಯ ಬ್ಯಾಂಕ್ ಆಫ್ ಬರೋಡ ಶಾಖಾ ಪ್ರಭಂಧಕರು ಶಿವಪ್ರಸಾದ್, ನಡ ಗ್ರಾ. ಪಂ., ಅಧ್ಯಕ್ಷೆ ಶ್ರೀಮತಿ ಮಂಜುಳಾ, ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಅಧ್ಯಕ್ಷ ಕೃಷ್ಣ ಕುಮಾರ್ ಭಾಗವಹಿಸಿದ್ದರು.


ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಹಾಗೂ ಊರವರಿಗೆ ಮತ್ತು ಸಾರ್ವಜನಿಕರಿಗೆ ಕ್ರೀಡಾಕೂಟ ನಡೆದು ಬಹುಮಾನ ವಿತರಿಸಲಾಯಿತು.
ಗೌರವಾಧ್ಯಕ್ಷ ಗಣೇಶ್ ಗೌಡ, ಅಧ್ಯಕ್ಷ ರಾಜೇಶ್ ಗೌಡ, ಉಪಾಧ್ಯಕ್ಷ ಅರುಣಾಕರ ಗೌಡ, ಕಾಯ೯ದಶಿ೯ ದಿನೇಶ್ ಗೌಡ, ಜೊತೆ ಕಾರ್ಯದರ್ಶಿ ಸುಕೇಶ್ ಪೂಜಾರಿ, ಕೋಶಾಧಿಕಾರಿ ಜಗದೀಶ ಗೌಡ ಹಾಗೂ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Related posts

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya
error: Content is protected !!