23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

ಬೆಳ್ತಂಗಡಿ: ಸಂಸ್ಕೃತಿಯ ಜೀವಾಳವೇ ಭಾಷೆಯಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಸಂಸ್ಕೃತ ಭಾಷೆಯು ಹಾಸುಹೊಕ್ಕಾಗಿದೆ. ಗ್ರೀಕ್ ,ಲ್ಯಾಟಿನ್ , ಜರ್ಮನ್ ಮುಂತಾದ ಭಾಷೆಗಳಲ್ಲಿ ಸಂಸ್ಕೃತ ಪದಗಳು ಹೇರಳವಾಗಿವೆ. ಸಂಸ್ಕೃತವು ಒಂದು ಕಾಲದಲ್ಲಿ ಆಡುಭಾಷೆಯಾಗಿ , ರಾಜ ಭಾಷೆಯಾಗಿದ್ದು ಈಗ ಪುನಃ ತನ್ನ ಅಸ್ತಿತ್ವ ಕಾಣುತ್ತಿರುವುದು ಸಂತೋಷದಾಯಕ ವಿಚಾರ. ವೇದಗಳು , ರಾಮಾಯಣ , ಮಹಾಭಾರತ , ಪುರಾಣಗಳು , ಸ್ಮೃತಿಗಳು ಮುಂತಾದ ಪ್ರಮುಖ ಕೃತಿಗಳ ಸಮೃದ್ಧ ಭಾಷೆ ಇದಾಗಿದ್ದು , ಇವುಗಳು ಸಾರ್ವಕಾಲಿಕ ಶ್ರೇಷ್ಠ ಕೃತಿಗಳು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ವಿಶ್ವ ಸಂಸ್ಕೃತ ದಿನದ ಅಂಗವಾಗಿ ನಡೆದ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಮಾತನಾಡಿದರು.
ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ , ಸಂಸ್ಕೃತ ಸಂಘದ ಅಧ್ಯಕ್ಷ ಗುರುದತ್ತ ಮರಾಠೆ , ಉಪಾಧ್ಯಕ್ಷೆ ವೈಷ್ಣವಿ ಭಟ್ , ಅಂತರಾಧ್ಯಯನ ವೃತ್ತಮ್ ಸಂಯೋಜಕರಾದ ರಜತ್ ಪಡ್ಕೆ ಹಾಗೂ ಗೌತಮಿ ಜಿ ಉಪಸ್ಥಿತರಿದ್ದರು.

ಹಂಸಿನಿ ಭಿಡೆ , ದರ್ಶಿನಿ , ಶ್ರೇಯಾ , ರುಜುಲಾ ಜೈನ್ , ಧನಶ್ರೀ ಇವರಿಂದ ಭರತನಾಟ್ಯ , ವೈಷ್ಣವಿ ಭಟ್ ಹಾಗೂ ತಂಡ , ಪ್ರಸನ್ನಾ ಹಾಗೂ ತಂಡ , ಭಾರ್ಗವಿ ಭಟ್ ತಂಡದಿಂದ ಸಮೂಹ ಗಾಯನ , ವಸುಧಾ ಗಾಂವ್ಕರ್ , ಸ್ತುತಿ ಹಾಗೂ ವಸುಧಾ ಅವರಿಂದ ಸಂಸ್ಕೃತ ಭಾಷೆಯ ಮಹತ್ವದ ಕುರಿತು ಭಾಷಣ ಹೀಗೆ ವೈವಿಧ್ಯ ಕಾರ್ಯಕ್ರಮಗಳು ನಡೆದವು.

ಸ್ಮರಣಶಕ್ತಿ ಸ್ಪರ್ಧೆಯಲ್ಲಿ ಸಂಚಿತ್ , ಧನುಷ್ ಯು ಹಾಗೂ ಕೇದಾರ್ ಹೆಬ್ಬಾರ್ ಬಹುಮಾನ ಪಡೆದರು. ಸಮೂಹ ಗಾಯನ ಸ್ಪರ್ಧೆಯಲ್ಲಿ ವೈಷ್ಣವಿ ಭಟ್ ಬಳಗ , ಪ್ರಸನ್ನಾ ಹಾಗೂ ಬಳಗ , ಕೃತಿ ಹಾಗೂ ಬಳಗ ಬಹುಮಾನ ಪಡೆದರು.

ಕಾರ್ಯದರ್ಶಿಗಳಾದ ಪ್ರಸನ್ನಾ ಸ್ವಾಗತಿಸಿ , ಶ್ರೀಪೂರ್ಣ ವಂದಿಸಿದರು. ಅಪೂರ್ವ ಬಹುಮಾನಿತರ ಪಟ್ಟಿ ವಾಚಿಸಿದರು. ಸುಮೇಧಾ ಗಾಂವ್ಕರ್ ನಿರೂಪಿಸಿದರು.

Related posts

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!