23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಬೆಳ್ತಂಗಡಿ : ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣ, ಬೆಳ್ತಂಗಡಿದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಅವರು ಮಾತಾಡಿ ಪ್ರತೀ ತಿಂಗಳ ಮೂರನೇ ಮಂಗಳವಾರ ನಡೆಯುವ ವಿಕಲಚೇತನರ ಹೊಸ ಗುರುತಿಸುವಿಕೆ ಹಾಗೂ ನವೀಕರಣದ ಶಿಬಿರವನ್ನು ಇನ್ನೂ ಪರಿಣಾಮಕಾರಿಯಾಗಿ ನಡೆಸಲು ಪುನರ್ವಸತಿ ಕಾರ್ಯಕರ್ತರು ಪ್ರತಿ ಮಾಸಿಕ ಕ್ಯಾಂಪ್ ಗಳಲ್ಲಿ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುವ ಬಗೆಗಿನ ವಿವರಣೆಯನ್ನ ನೀಡುವುದರ ಮೂಲಕ ಹೊಸ ಪ್ರಕಾರಗಳನ್ನು ತಿಳಿಸಿದರು. ಹಾಗೂ ಪ್ರತಿ ತಿಂಗಳಲ್ಲಿ ನಡೆಸುವ ಶಿಬಿರವು ಇನ್ನೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮತ್ತು ಎಲ್ಲಾ ರೀತಿಯಲ್ಲಿ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಆಗಲು ಇನ್ನೂ ಅತ್ಯಂತ ಪರಿಣಾಮಕಾರಿಯಾಗಿ ಯಶಸ್ವಿ ಆಗಲು ತಾಲ್ಲೂಕಿನ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರು ಶ್ರಮಿಸಲು ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಮತ್ತು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರ ಮಾಸಿಕ ವರದಿಯನ್ನು ಪರಿಶೀಲಿಸಿದ ಅವರು ಮಾಸಿಕ ವರದಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ರಾಜ್ಯ ವಿಕಲಚೇತನರ ಇಲಾಖೆಯಿಂದ ಬಂದಿರುವ ಹೆಚ್ಚುವರಿ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ನೀಡಿದರು.

ಈ ಸಂದರ್ಭದಲ್ಲಿ ವಿಕಲಚೇತನರ ನೋಡಲ್ ಅಧಿಕಾರಿಯಾದ ಶ್ರೀಮತಿ ರತ್ನಾವತಿ ಯವರು ಉಪಸ್ಥಿತರಿದ್ದರು ಮತ್ತು ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಿದರು

Related posts

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya
error: Content is protected !!