ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

ಬೆಳ್ತಂಗಡಿ: ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಆವಾಸೀಯ ಶಾಲೆಗೆ ಬೇಟಿ ಕೊಟ್ಟು ಪರಿಶೀಲಿಸಿದಾಗ, ಶಾಲೆಯ ಬಹುತೇಕ ಕೊಠಡಿಗಳಲ್ಲಿ ನೀರು ಸೋರುತ್ತಿರುವುದು ಕಂಡುಬಂದಿರುತ್ತದೆ. ಶಾಲೆಯಲ್ಲಿ 26 ಮಂದಿ ಬಾಲಕಿಯರು ಹಾಗೂ 74 ಮಂದಿ ಬಾಲಕರು ಒಟ್ಟಾಗಿ 100ವಿದ್ಯಾರ್ಥಿಗಳು 6 ನೇ ತರಗತಿಯಿಂದ 8 ತರಗತಿಯವರೆಗೆ ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ.

ಶಾಲೆಯನ್ನು ಪರಿಶೀಲಿಸುವ ಸಂಧರ್ಭದಲ್ಲಿ ಶಾಲೆಗೆ ಯಾವುದೇ ಆವರಣಗೋಡೆ ಹಾಗೂ ಭದ್ರತಾ ಸಿಬ್ಬಂದಿ ಕಂಡುಬಂದಿರುವುದಿಲ್ಲ. ಆದ್ದರಿಂದ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಭದ್ರತಾ ಹಿತ ದೃಷ್ಟಿಯಿಂದ ಕೂಡಲೇ ಶಾಲೆಗೆ ಆವರಣಗೋಡೆ ನಿರ್ಮಾಣ, ಭದ್ರತಾ ಸಿಬ್ಬಂದಿ ನೇಮಕ ಹಾಗೂ ಸೋರುತ್ತಿರುವ ಶಾಲಾ ಕಟ್ಟಡವನ್ನು ಸರಿಪಡಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಪತ್ರದ ಮೂಲಕ ವಿನಂತಿಸಿದ್ದಾರೆ.

Related posts

ವಿ.ಹಿಂ.ಪ. ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ ಧನ ಸಹಾಯ ವಿತರಣೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya
error: Content is protected !!