30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

ಬೆಳ್ತಂಗಡಿ: ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಆವಾಸೀಯ ಶಾಲೆಗೆ ಬೇಟಿ ಕೊಟ್ಟು ಪರಿಶೀಲಿಸಿದಾಗ, ಶಾಲೆಯ ಬಹುತೇಕ ಕೊಠಡಿಗಳಲ್ಲಿ ನೀರು ಸೋರುತ್ತಿರುವುದು ಕಂಡುಬಂದಿರುತ್ತದೆ. ಶಾಲೆಯಲ್ಲಿ 26 ಮಂದಿ ಬಾಲಕಿಯರು ಹಾಗೂ 74 ಮಂದಿ ಬಾಲಕರು ಒಟ್ಟಾಗಿ 100ವಿದ್ಯಾರ್ಥಿಗಳು 6 ನೇ ತರಗತಿಯಿಂದ 8 ತರಗತಿಯವರೆಗೆ ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ.

ಶಾಲೆಯನ್ನು ಪರಿಶೀಲಿಸುವ ಸಂಧರ್ಭದಲ್ಲಿ ಶಾಲೆಗೆ ಯಾವುದೇ ಆವರಣಗೋಡೆ ಹಾಗೂ ಭದ್ರತಾ ಸಿಬ್ಬಂದಿ ಕಂಡುಬಂದಿರುವುದಿಲ್ಲ. ಆದ್ದರಿಂದ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಭದ್ರತಾ ಹಿತ ದೃಷ್ಟಿಯಿಂದ ಕೂಡಲೇ ಶಾಲೆಗೆ ಆವರಣಗೋಡೆ ನಿರ್ಮಾಣ, ಭದ್ರತಾ ಸಿಬ್ಬಂದಿ ನೇಮಕ ಹಾಗೂ ಸೋರುತ್ತಿರುವ ಶಾಲಾ ಕಟ್ಟಡವನ್ನು ಸರಿಪಡಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಪತ್ರದ ಮೂಲಕ ವಿನಂತಿಸಿದ್ದಾರೆ.

Related posts

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!