22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ “ಆನ್ವೀಕ್ಷ್ಯಂ-2024” ಎಂಬ ಶೀರ್ಷಿಕೆಯಡಿಯಲ್ಲಿ ಆ.21 ರಂದು ನಡೆಯಿತು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ.ಎಸ್ ಕಾರ್ಯಕ್ರಮ ಉದ್ಘಾಟಿಸಿ, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದ ಸ್ಪರ್ಧಾರ್ಥಿಗಳಿಗೆ ಶುಭಹಾರೈಸಿದರು.

ಶಾಲೆಯ ಹಿರಿಯ ವಿದ್ಯಾರ್ಥಿನಿ ಡಾ.ಅಖಿಲ ಭಂಡಾರ್ಕರ್.ಪಿ (ಎಮ್.ಬಿ.ಬಿ.ಎಸ್, ಎಮ್.ಡಿ ಜೆನೆರಲ್ ಮೆಡಿಸಿನ್, ಡಿ.ಎಮ್ ಎಂಡೋಕ್ರಿನೋಲಜಿ) ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಸ್ಪರ್ಧೆಯಲ್ಲಿ ಜಿಲ್ಲೆಯ ಒಟ್ಟು 33 ಸಿ.ಬಿ.ಎಸ್.ಇ ಶಾಲಾ ತಂಡಗಳು ಭಾಗವಹಿಸಿದ್ದವು.

Related posts

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!