23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಅಧ್ಯಾಪಕರಾಗಿ ಕಳೆದ ಮೂರು ದಶಕಗಳಿಂದ ಸೇವೆಯನ್ನು ಸಲ್ಲಿಸುತ್ತಿರುವ ಡಾ.ಶ್ರೀಧರ ಭಟ್ಟ ಇವರ ಸರ್ವಾಂಗೀಣ ಕೊಡುಗೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು ಇವರಿಗೆ ವೃತ್ತಿ ಪದೋನ್ನತಿಯನ್ನು ಮಂಜೂರು ಮಾಡಿದೆ.


ಡಾ ಶ್ರೀಧರ ಭಟ್ಟ ಇವರು ಉಜಿರೆಯ ಪ್ರತಿಷ್ಠಿತ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ತದನಂತರ ಸಹ ಪ್ರಾಧ್ಯಾಪಕರಾಗಿ, ಕಾಲೇಜಿನ ವಿವಿಧ ಹಂತದ ಚಟುವಟಿಕೆಗಳಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಸಂಸ್ಥೆಯ ಏಳಿಗೆಗೆ ಶ್ರದ್ಧೆಯಿಂದ ದುಡಿದವರು. ಇವರು ಕಾಲೇಜಿನ ಪಠ್ಯ ಮತ್ತು ಪಠ್ಯೇತರ ವಿವಿಧ ಸಮಿತಿಗಳಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಜೊತೆಗೆ ಸಂಸ್ಕೃತ ವಿಭಾಗದ ಅಧ್ಯಾಪಕರಾಗಿ, ಸಂಸ್ಕೃತ ಪ್ರಸಾರ ಪ್ರಚಾರದಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದವರು. ಕಾಲೇಜಿನ ಎನ್ ಸಿ ಸಿ ನೌಕಾ ವಿಭಾಗದ ಅಧಿಕಾರಿಯಾಗಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ನ್ನು ಗುರುತಿಸಿ ಮುಖ್ಯಮಂತ್ರಿಗಳ ಪ್ರಶಂಸಾಪತ್ರ ಮತ್ತು ಡೆಪ್ಯೂಟಿ ಡೈರೆಕ್ಟರ್ ಜನರಲ್ ಕರ್ನಾಟಕ& ಗೋವಾ ವಿಭಾಗದ ಅಧಿಕಾರಿಗಳಿಂದ ವಿಶೇಷ ಪ್ರಶಂಸಾಪತ್ರ ದೊರಕಿರುತ್ತದೆ. ಅನೇಕ ಸೆಮಿನಾರುಗಳನ್ನು ಸಂಯೋಜಿಸಿ, ಹಲವು ಸೆಮಿನಾರುಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಹಲವು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಯ ಸದಸ್ಯರಾಗಿ, ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯವನ್ನು ನಿರ್ವಹಿಸಿದ್ದಾರೆ.


ಡಾ ಶ್ರೀಧರ ಭಟ್ಟ ಇವರ ಸಂಶೋಧನಾ ಲೇಖನಗಳ ಪ್ರಕಟಣೆಯನ್ನು, ಹಲವು ಪುಸ್ತಕ ಮತ್ತು ಲೇಖನಗಳ ಕೊಡುಗೆಯನ್ನು, ವಿಶೇಷವಾಗಿ ವಿದ್ಯಾರ್ಥಿಗಳಿಗೆ ನವೀನ ಮಾದರಿಯಲ್ಲಿ ಪಾಠಪ್ರವಚನಗಳನ್ನು ಮಾಡುವುದನ್ನು, ಹಾಗೆಯೇ ಸಭೆ-ಸಮಾರಂಭಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೈಗೊಂಡ ಜ್ಞಾನ ಪ್ರಸಾರ ಕಾರ್ಯಗಳೆಲ್ಲವನ್ನು ಗುರುತಿಸಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಇವರಿಗೆ ಪ್ರೊಫೆಸರ್ ಎಂಬ ವೃತ್ತಿ ಪದೋನ್ನತಿಯನ್ನು ನೀಡಿ ಅಧಿಕೃತ ಸೂಚನೆಯನ್ನು ಹೊರಡಿಸಿದೆ.

Related posts

ಎಸ್‌ಡಿಎಂ ತಾಂತ್ರಿಕ ವಿದ್ಯಾಸಂಸ್ಥೆ ಗ್ರಂಥಪಾಲಕರಿಗಾಗಿ ವೃತ್ತಿಪರ ಶಿಕ್ಷಣ ಕಾರ್ಯಾಗಾರ : ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya
error: Content is protected !!