23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರ
ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕಕ್ಕಿಂಜೆ ಚಿಬಿದ್ರೆಯಲ್ಲಿ ನಡೆಯಿತು.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೇರವೇರಿಸಿ ಕ್ಯಾಂಪಸ್ ಗೆ ವಾದಿ ಸಲಾಮತಿ ವಲ್ ಹುದಾ ಎಂದು ನಾಮಕರಣ ಮಾಡಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರ ನೇತೃತ್ವದಲ್ಲಿ ದಾರುಸ್ಸಲಾಂ ಸಂಸ್ಥೆಯು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತಿದ್ದು ಚಿಬಿದ್ರೆಯಲ್ಲಿ ಆರಂಭಗೊಳ್ಳುವ ಸಂಸ್ಥೆಯು ಮಹತ್ತರ‌ ಯೋಜನೆಯಲ್ಲಿ ಎಲ್ಲರೂ ಕೈಜೋಡಿಸಬೇಕು ಸಹಾಯ ಸಹಕಾರ ಮಾಡುವ ಎಲ್ಲರನ್ನೂ ದೇವರು ಅನುಗ್ರಹಿಸಲಿ ಎಂದರು
ಕಾರ್ಯಕ್ರಮದಲ್ಲಿ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಬಂಬ್ರಾಣ ಅಬ್ದುಲ್ ಖಾದರ್ ಖಾಸಿಮಿ. ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ.
ದಾರುಸ್ಸಲಾಂ ಆಡಳಿತ ಸಮಿತಿಯ ಪದಾಧಿಕಾರಿಗಳು, ದುಬೈ, ಅಬುಧಾಬಿ, ಶಾರ್ಜಾ ಸಮಿತಿಯ ಪ್ರತಿನಿಧಿಗಳು, ಸ್ವಾಗತ ಸಮಿತಿಯ ನೇತಾರರು ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
error: Content is protected !!