July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

ಬೆಳ್ತಂಗಡಿ: ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಆವಾಸೀಯ ಶಾಲೆಗೆ ಬೇಟಿ ಕೊಟ್ಟು ಪರಿಶೀಲಿಸಿದಾಗ, ಶಾಲೆಯ ಬಹುತೇಕ ಕೊಠಡಿಗಳಲ್ಲಿ ನೀರು ಸೋರುತ್ತಿರುವುದು ಕಂಡುಬಂದಿರುತ್ತದೆ. ಶಾಲೆಯಲ್ಲಿ 26 ಮಂದಿ ಬಾಲಕಿಯರು ಹಾಗೂ 74 ಮಂದಿ ಬಾಲಕರು ಒಟ್ಟಾಗಿ 100ವಿದ್ಯಾರ್ಥಿಗಳು 6 ನೇ ತರಗತಿಯಿಂದ 8 ತರಗತಿಯವರೆಗೆ ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ.

ಶಾಲೆಯನ್ನು ಪರಿಶೀಲಿಸುವ ಸಂಧರ್ಭದಲ್ಲಿ ಶಾಲೆಗೆ ಯಾವುದೇ ಆವರಣಗೋಡೆ ಹಾಗೂ ಭದ್ರತಾ ಸಿಬ್ಬಂದಿ ಕಂಡುಬಂದಿರುವುದಿಲ್ಲ. ಆದ್ದರಿಂದ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಭದ್ರತಾ ಹಿತ ದೃಷ್ಟಿಯಿಂದ ಕೂಡಲೇ ಶಾಲೆಗೆ ಆವರಣಗೋಡೆ ನಿರ್ಮಾಣ, ಭದ್ರತಾ ಸಿಬ್ಬಂದಿ ನೇಮಕ ಹಾಗೂ ಸೋರುತ್ತಿರುವ ಶಾಲಾ ಕಟ್ಟಡವನ್ನು ಸರಿಪಡಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಪತ್ರದ ಮೂಲಕ ವಿನಂತಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya
error: Content is protected !!