25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

ಬೆಳ್ತಂಗಡಿ: ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಆವಾಸೀಯ ಶಾಲೆಗೆ ಬೇಟಿ ಕೊಟ್ಟು ಪರಿಶೀಲಿಸಿದಾಗ, ಶಾಲೆಯ ಬಹುತೇಕ ಕೊಠಡಿಗಳಲ್ಲಿ ನೀರು ಸೋರುತ್ತಿರುವುದು ಕಂಡುಬಂದಿರುತ್ತದೆ. ಶಾಲೆಯಲ್ಲಿ 26 ಮಂದಿ ಬಾಲಕಿಯರು ಹಾಗೂ 74 ಮಂದಿ ಬಾಲಕರು ಒಟ್ಟಾಗಿ 100ವಿದ್ಯಾರ್ಥಿಗಳು 6 ನೇ ತರಗತಿಯಿಂದ 8 ತರಗತಿಯವರೆಗೆ ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ.

ಶಾಲೆಯನ್ನು ಪರಿಶೀಲಿಸುವ ಸಂಧರ್ಭದಲ್ಲಿ ಶಾಲೆಗೆ ಯಾವುದೇ ಆವರಣಗೋಡೆ ಹಾಗೂ ಭದ್ರತಾ ಸಿಬ್ಬಂದಿ ಕಂಡುಬಂದಿರುವುದಿಲ್ಲ. ಆದ್ದರಿಂದ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಭದ್ರತಾ ಹಿತ ದೃಷ್ಟಿಯಿಂದ ಕೂಡಲೇ ಶಾಲೆಗೆ ಆವರಣಗೋಡೆ ನಿರ್ಮಾಣ, ಭದ್ರತಾ ಸಿಬ್ಬಂದಿ ನೇಮಕ ಹಾಗೂ ಸೋರುತ್ತಿರುವ ಶಾಲಾ ಕಟ್ಟಡವನ್ನು ಸರಿಪಡಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಪತ್ರದ ಮೂಲಕ ವಿನಂತಿಸಿದ್ದಾರೆ.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya
error: Content is protected !!