38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

ಬೆಳ್ತಂಗಡಿ : ಮನೆಯಲ್ಲಿ ಒಬ್ಬ ಜಂಟಿ ಯಾಗಿದ್ದಾಗ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನಾ ಸ್ಥಳಕ್ಕೆ ಇಂದು ಪಶ್ಚಿಮ ವಲಯ ಐಜಿಪಿ ಅಮೀತ್ ಸಿಂಗ್ ಭೇಟಿ ನೀಡಿ ಮಾಹಿತಿ ಪಡೆದರು.ಕೊಲೆ ಆರೋಪಿಗಳ ಪತ್ತೆಗಾಗಿ ಮೂರು ತಂಡ ರಚಿಸಲಾಗಿದೆ.ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ.ಕಾಂಪೌಂಡ್ ನ ನಿವೃತ್ತ ಶಿಕ್ಷಕ ಎಸ್.ಪಿ.ಬಾಲಕೃಷ್ಣ ಭಟ್ (83) ರನ್ನು ಆ. 20 ರಂದು ಮಧ್ಯಾಹ್ನದ ಬಳಿಕ ಮನೆಯಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳ ತಂಡ ಮನೆಯೊಳಗೆ ಬಂದು ದಾಳಿ ಮಾಡಿದ್ದು. ಈ ವೇಳೆ ತಪ್ಪಿಸಿಕೊಂಡು ಮನೆಯಿಂದ ಅಂಗಳಕ್ಕೆ ಬಂದಿದ್ರೂ ಹಂತಕರು ಕತ್ತಿಗೆ ಬಲವಾಗಿ ಕಡಿದು ಕೊಲೆ ಮಾಡಿ ಹೋಗಿದ್ದಾರೆ ಎನ್ನಲಾಗಿದೆ.

ಕೊಲೆಯಾದ ಬಾಲಕೃಷ್ಣ ಭಟ್ ಮನೆಗೆ ಆ.21 ರಂದು ಮಧ್ಯಾಹ್ನ ಪಶ್ಚಿಮ ವಲಯ ಐಜಿಪಿ ಅಮೀತ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೆಯವರಿಂದ ಹಾಗೂ ಪೊಲೀಸರಿಂದ ಮಾಹಿತಿ ಪಡೆದುಕೊಂಡರು.ಬಳಿಕ ತನಿಖಾ ತಂಡದ ಜೊತೆ ಐಜಿಪಿ ಚರ್ಚಿಸಿ ಕೊಲೆ ಪ್ರಕರಣ ಭೇದಿಸಲು ತಂಡಕ್ಕೆ ಮಾಹಿತಿ ನೀಡಿದರು‌‌.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತಪಟ್ಟ ಬಾಲಕೃಷ್ಣ ಭಟ್ ಕಿರಿಯ ಮಗ ಸುರೇಶ್ ಭಟ್ ಆ.20 ರಂದು ರಾತ್ರಿ ನೀಡಿದ ದೂರಿನಂತೆ ಬಿ.ಎನ್.ಎಸ್ 103 ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದ್ದು. ಕೊಲೆ ಆರೋಪಿಗಳ ಪತ್ತೆಗಾಗಿ ಮೂರು ತಂಡ ರಚಿಸಲಾಗಿದ್ದು. ಬಂಟ್ಬಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತಂಡ , ಧರ್ಮಸ್ಥಳ ಇಬ್ಬರು ಸಬ್ ಇನ್ಸ್ಪೆಕ್ಟರ್ ಗಳ ತಂಡ ಹಾಗೂ ಮತ್ತೊಂದು ತಂಡದಿಂದ ವಿವಿಧ ತಂಡಗಳನ್ನು ದ.ಕ.ಎಸ್ಪಿ ಯತೀಶ್.ಎನ್ ಮಾಡಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Related posts

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!