July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಈ ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಅದರಲ್ಲಿಯೂ ಮುಖ್ಯವಾಗಿ ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈಧ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya
error: Content is protected !!