24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

ಬೆಳ್ತಂಗಡಿ: ಸಂಸ್ಕೃತಿಯ ಜೀವಾಳವೇ ಭಾಷೆಯಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಸಂಸ್ಕೃತ ಭಾಷೆಯು ಹಾಸುಹೊಕ್ಕಾಗಿದೆ. ಗ್ರೀಕ್ ,ಲ್ಯಾಟಿನ್ , ಜರ್ಮನ್ ಮುಂತಾದ ಭಾಷೆಗಳಲ್ಲಿ ಸಂಸ್ಕೃತ ಪದಗಳು ಹೇರಳವಾಗಿವೆ. ಸಂಸ್ಕೃತವು ಒಂದು ಕಾಲದಲ್ಲಿ ಆಡುಭಾಷೆಯಾಗಿ , ರಾಜ ಭಾಷೆಯಾಗಿದ್ದು ಈಗ ಪುನಃ ತನ್ನ ಅಸ್ತಿತ್ವ ಕಾಣುತ್ತಿರುವುದು ಸಂತೋಷದಾಯಕ ವಿಚಾರ. ವೇದಗಳು , ರಾಮಾಯಣ , ಮಹಾಭಾರತ , ಪುರಾಣಗಳು , ಸ್ಮೃತಿಗಳು ಮುಂತಾದ ಪ್ರಮುಖ ಕೃತಿಗಳ ಸಮೃದ್ಧ ಭಾಷೆ ಇದಾಗಿದ್ದು , ಇವುಗಳು ಸಾರ್ವಕಾಲಿಕ ಶ್ರೇಷ್ಠ ಕೃತಿಗಳು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ವಿಶ್ವ ಸಂಸ್ಕೃತ ದಿನದ ಅಂಗವಾಗಿ ನಡೆದ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಮಾತನಾಡಿದರು.
ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ , ಸಂಸ್ಕೃತ ಸಂಘದ ಅಧ್ಯಕ್ಷ ಗುರುದತ್ತ ಮರಾಠೆ , ಉಪಾಧ್ಯಕ್ಷೆ ವೈಷ್ಣವಿ ಭಟ್ , ಅಂತರಾಧ್ಯಯನ ವೃತ್ತಮ್ ಸಂಯೋಜಕರಾದ ರಜತ್ ಪಡ್ಕೆ ಹಾಗೂ ಗೌತಮಿ ಜಿ ಉಪಸ್ಥಿತರಿದ್ದರು.

ಹಂಸಿನಿ ಭಿಡೆ , ದರ್ಶಿನಿ , ಶ್ರೇಯಾ , ರುಜುಲಾ ಜೈನ್ , ಧನಶ್ರೀ ಇವರಿಂದ ಭರತನಾಟ್ಯ , ವೈಷ್ಣವಿ ಭಟ್ ಹಾಗೂ ತಂಡ , ಪ್ರಸನ್ನಾ ಹಾಗೂ ತಂಡ , ಭಾರ್ಗವಿ ಭಟ್ ತಂಡದಿಂದ ಸಮೂಹ ಗಾಯನ , ವಸುಧಾ ಗಾಂವ್ಕರ್ , ಸ್ತುತಿ ಹಾಗೂ ವಸುಧಾ ಅವರಿಂದ ಸಂಸ್ಕೃತ ಭಾಷೆಯ ಮಹತ್ವದ ಕುರಿತು ಭಾಷಣ ಹೀಗೆ ವೈವಿಧ್ಯ ಕಾರ್ಯಕ್ರಮಗಳು ನಡೆದವು.

ಸ್ಮರಣಶಕ್ತಿ ಸ್ಪರ್ಧೆಯಲ್ಲಿ ಸಂಚಿತ್ , ಧನುಷ್ ಯು ಹಾಗೂ ಕೇದಾರ್ ಹೆಬ್ಬಾರ್ ಬಹುಮಾನ ಪಡೆದರು. ಸಮೂಹ ಗಾಯನ ಸ್ಪರ್ಧೆಯಲ್ಲಿ ವೈಷ್ಣವಿ ಭಟ್ ಬಳಗ , ಪ್ರಸನ್ನಾ ಹಾಗೂ ಬಳಗ , ಕೃತಿ ಹಾಗೂ ಬಳಗ ಬಹುಮಾನ ಪಡೆದರು.

ಕಾರ್ಯದರ್ಶಿಗಳಾದ ಪ್ರಸನ್ನಾ ಸ್ವಾಗತಿಸಿ , ಶ್ರೀಪೂರ್ಣ ವಂದಿಸಿದರು. ಅಪೂರ್ವ ಬಹುಮಾನಿತರ ಪಟ್ಟಿ ವಾಚಿಸಿದರು. ಸುಮೇಧಾ ಗಾಂವ್ಕರ್ ನಿರೂಪಿಸಿದರು.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!