April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

ಬೆಳ್ತಂಗಡಿ: ಜೆಸಿಐ ಭಾರತದ ಅಮೃತ ಮಹೋತ್ಸವ ವರ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಸಿ.ಆರ್ ರಿಕೇಶ್ ಶರ್ಮಾರವರು ಆ. 21 ರಂದು ಬಳಂಜ ಶಾಲೆಗೆ ಭೇಟಿ ನೀಡಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬಳಂಜ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ 1ಲಕ್ಷ ಮೊತ್ತದ ಶಾಶ್ವತ ಯೋಜನೆಗಳನ್ನು ಹಸ್ತಾಂತರ ಮಾಡಿದರು.

ಬಳಂಜ ಮತ್ತು ಅಟ್ಲಾಜೆ ಶಾಲೆಗೆ ಕಂಪ್ಯೂಟರ್ ಹಸ್ತಾಂತರ, ಬಳಂಜ ಶಾಲೆ ಮತ್ತು ಕಾಪಿನಡ್ಕ ರಸ್ತೆಗೆ ಬ್ಯಾರಿಕೇಡ್ ಹಸ್ತಾಂತರ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ವಹಿಸಿದ್ದರು.

ವೇದಿಕೆಯಲ್ಲಿ ವಲಯ 15ರ ಅಧ್ಯಕ್ಷರಾದ ಅಡ್ವಕೇಟ್ ಗಿರೀಶ್ ಎಸ್ ಪಿ, ಉಪಾಧ್ಯಕ್ಷರಾದ ಶಂಕರ್ ರಾವ್, ವಲಯ ಅಧಿಕಾರಿಗಳಾದ ಅಭಿಲಾಶ್,ಸತೀಶ್ ಪೂಜಾರಿ, ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ,ರೆನಿಲ್ಡಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸಿಐ ರಾಷ್ಟ್ರೀಯ ಅಧ್ಯಕ್ಷರನ್ನು ಬಳಂಜ ಶಾಲೆ,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ಊರವರ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷರುಗಳು,ಪಧಾಧಿಕಾರಿಗಳು,ಸದಸ್ಯರು, ಊರವರು, ಸಂಘ ಸಂಸ್ಥೆಗಳ ಪ್ರಮುಖರು,ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೂರ್ವಾಧ್ಯಕ್ಷ ಪ್ರಸಾದ್ ಬಿ.ಎಸ್ ವೇದಿಕೆ ಆಹ್ವಾನಿಸಿದರು,ಮಹಿಳಾ ಜೆಸಿ ಸಂಯೋಜಕಿ ಶೃತಿ ರಂಜಿತ್ ಜೆಸಿವಾಣಿ ಉದ್ಘೋಷಿಸಿದರು, ಪೂರ್ವಾಧ್ಯಕ್ಷ ಪ್ರಶಾಂತ್ ಲಾಯಿಲ ವಂದಿಸಿದರು.

Related posts

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya
error: Content is protected !!