July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

ಬೆಳ್ತಂಗಡಿ: ಜೆಸಿಐ ಭಾರತದ ಅಮೃತ ಮಹೋತ್ಸವ ವರ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಸಿ.ಆರ್ ರಿಕೇಶ್ ಶರ್ಮಾರವರು ಆ. 21 ರಂದು ಬಳಂಜ ಶಾಲೆಗೆ ಭೇಟಿ ನೀಡಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬಳಂಜ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ 1ಲಕ್ಷ ಮೊತ್ತದ ಶಾಶ್ವತ ಯೋಜನೆಗಳನ್ನು ಹಸ್ತಾಂತರ ಮಾಡಿದರು.

ಬಳಂಜ ಮತ್ತು ಅಟ್ಲಾಜೆ ಶಾಲೆಗೆ ಕಂಪ್ಯೂಟರ್ ಹಸ್ತಾಂತರ, ಬಳಂಜ ಶಾಲೆ ಮತ್ತು ಕಾಪಿನಡ್ಕ ರಸ್ತೆಗೆ ಬ್ಯಾರಿಕೇಡ್ ಹಸ್ತಾಂತರ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ವಹಿಸಿದ್ದರು.

ವೇದಿಕೆಯಲ್ಲಿ ವಲಯ 15ರ ಅಧ್ಯಕ್ಷರಾದ ಅಡ್ವಕೇಟ್ ಗಿರೀಶ್ ಎಸ್ ಪಿ, ಉಪಾಧ್ಯಕ್ಷರಾದ ಶಂಕರ್ ರಾವ್, ವಲಯ ಅಧಿಕಾರಿಗಳಾದ ಅಭಿಲಾಶ್,ಸತೀಶ್ ಪೂಜಾರಿ, ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ,ರೆನಿಲ್ಡಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸಿಐ ರಾಷ್ಟ್ರೀಯ ಅಧ್ಯಕ್ಷರನ್ನು ಬಳಂಜ ಶಾಲೆ,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ಊರವರ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷರುಗಳು,ಪಧಾಧಿಕಾರಿಗಳು,ಸದಸ್ಯರು, ಊರವರು, ಸಂಘ ಸಂಸ್ಥೆಗಳ ಪ್ರಮುಖರು,ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೂರ್ವಾಧ್ಯಕ್ಷ ಪ್ರಸಾದ್ ಬಿ.ಎಸ್ ವೇದಿಕೆ ಆಹ್ವಾನಿಸಿದರು,ಮಹಿಳಾ ಜೆಸಿ ಸಂಯೋಜಕಿ ಶೃತಿ ರಂಜಿತ್ ಜೆಸಿವಾಣಿ ಉದ್ಘೋಷಿಸಿದರು, ಪೂರ್ವಾಧ್ಯಕ್ಷ ಪ್ರಶಾಂತ್ ಲಾಯಿಲ ವಂದಿಸಿದರು.

Related posts

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!