September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಬೆಳ್ತಂಗಡಿ : ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣ, ಬೆಳ್ತಂಗಡಿದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಅವರು ಮಾತಾಡಿ ಪ್ರತೀ ತಿಂಗಳ ಮೂರನೇ ಮಂಗಳವಾರ ನಡೆಯುವ ವಿಕಲಚೇತನರ ಹೊಸ ಗುರುತಿಸುವಿಕೆ ಹಾಗೂ ನವೀಕರಣದ ಶಿಬಿರವನ್ನು ಇನ್ನೂ ಪರಿಣಾಮಕಾರಿಯಾಗಿ ನಡೆಸಲು ಪುನರ್ವಸತಿ ಕಾರ್ಯಕರ್ತರು ಪ್ರತಿ ಮಾಸಿಕ ಕ್ಯಾಂಪ್ ಗಳಲ್ಲಿ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುವ ಬಗೆಗಿನ ವಿವರಣೆಯನ್ನ ನೀಡುವುದರ ಮೂಲಕ ಹೊಸ ಪ್ರಕಾರಗಳನ್ನು ತಿಳಿಸಿದರು. ಹಾಗೂ ಪ್ರತಿ ತಿಂಗಳಲ್ಲಿ ನಡೆಸುವ ಶಿಬಿರವು ಇನ್ನೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮತ್ತು ಎಲ್ಲಾ ರೀತಿಯಲ್ಲಿ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಆಗಲು ಇನ್ನೂ ಅತ್ಯಂತ ಪರಿಣಾಮಕಾರಿಯಾಗಿ ಯಶಸ್ವಿ ಆಗಲು ತಾಲ್ಲೂಕಿನ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರು ಶ್ರಮಿಸಲು ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಮತ್ತು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರ ಮಾಸಿಕ ವರದಿಯನ್ನು ಪರಿಶೀಲಿಸಿದ ಅವರು ಮಾಸಿಕ ವರದಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ರಾಜ್ಯ ವಿಕಲಚೇತನರ ಇಲಾಖೆಯಿಂದ ಬಂದಿರುವ ಹೆಚ್ಚುವರಿ ಮಾಹಿತಿಯನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ನೀಡಿದರು.

ಈ ಸಂದರ್ಭದಲ್ಲಿ ವಿಕಲಚೇತನರ ನೋಡಲ್ ಅಧಿಕಾರಿಯಾದ ಶ್ರೀಮತಿ ರತ್ನಾವತಿ ಯವರು ಉಪಸ್ಥಿತರಿದ್ದರು ಮತ್ತು ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಿದರು

Related posts

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya
error: Content is protected !!