23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರ
ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕಕ್ಕಿಂಜೆ ಚಿಬಿದ್ರೆಯಲ್ಲಿ ನಡೆಯಿತು.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೇರವೇರಿಸಿ ಕ್ಯಾಂಪಸ್ ಗೆ ವಾದಿ ಸಲಾಮತಿ ವಲ್ ಹುದಾ ಎಂದು ನಾಮಕರಣ ಮಾಡಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರ ನೇತೃತ್ವದಲ್ಲಿ ದಾರುಸ್ಸಲಾಂ ಸಂಸ್ಥೆಯು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತಿದ್ದು ಚಿಬಿದ್ರೆಯಲ್ಲಿ ಆರಂಭಗೊಳ್ಳುವ ಸಂಸ್ಥೆಯು ಮಹತ್ತರ‌ ಯೋಜನೆಯಲ್ಲಿ ಎಲ್ಲರೂ ಕೈಜೋಡಿಸಬೇಕು ಸಹಾಯ ಸಹಕಾರ ಮಾಡುವ ಎಲ್ಲರನ್ನೂ ದೇವರು ಅನುಗ್ರಹಿಸಲಿ ಎಂದರು
ಕಾರ್ಯಕ್ರಮದಲ್ಲಿ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಬಂಬ್ರಾಣ ಅಬ್ದುಲ್ ಖಾದರ್ ಖಾಸಿಮಿ. ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ.
ದಾರುಸ್ಸಲಾಂ ಆಡಳಿತ ಸಮಿತಿಯ ಪದಾಧಿಕಾರಿಗಳು, ದುಬೈ, ಅಬುಧಾಬಿ, ಶಾರ್ಜಾ ಸಮಿತಿಯ ಪ್ರತಿನಿಧಿಗಳು, ಸ್ವಾಗತ ಸಮಿತಿಯ ನೇತಾರರು ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!