24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

ಬೆಳ್ತಂಗಡಿ: ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಆವಾಸೀಯ ಶಾಲೆಗೆ ಬೇಟಿ ಕೊಟ್ಟು ಪರಿಶೀಲಿಸಿದಾಗ, ಶಾಲೆಯ ಬಹುತೇಕ ಕೊಠಡಿಗಳಲ್ಲಿ ನೀರು ಸೋರುತ್ತಿರುವುದು ಕಂಡುಬಂದಿರುತ್ತದೆ. ಶಾಲೆಯಲ್ಲಿ 26 ಮಂದಿ ಬಾಲಕಿಯರು ಹಾಗೂ 74 ಮಂದಿ ಬಾಲಕರು ಒಟ್ಟಾಗಿ 100ವಿದ್ಯಾರ್ಥಿಗಳು 6 ನೇ ತರಗತಿಯಿಂದ 8 ತರಗತಿಯವರೆಗೆ ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ.

ಶಾಲೆಯನ್ನು ಪರಿಶೀಲಿಸುವ ಸಂಧರ್ಭದಲ್ಲಿ ಶಾಲೆಗೆ ಯಾವುದೇ ಆವರಣಗೋಡೆ ಹಾಗೂ ಭದ್ರತಾ ಸಿಬ್ಬಂದಿ ಕಂಡುಬಂದಿರುವುದಿಲ್ಲ. ಆದ್ದರಿಂದ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಭದ್ರತಾ ಹಿತ ದೃಷ್ಟಿಯಿಂದ ಕೂಡಲೇ ಶಾಲೆಗೆ ಆವರಣಗೋಡೆ ನಿರ್ಮಾಣ, ಭದ್ರತಾ ಸಿಬ್ಬಂದಿ ನೇಮಕ ಹಾಗೂ ಸೋರುತ್ತಿರುವ ಶಾಲಾ ಕಟ್ಟಡವನ್ನು ಸರಿಪಡಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಪತ್ರದ ಮೂಲಕ ವಿನಂತಿಸಿದ್ದಾರೆ.

Related posts

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
error: Content is protected !!