23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

ಬೆಳ್ತಂಗಡಿ: ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಆವಾಸೀಯ ಶಾಲೆಗೆ ಬೇಟಿ ಕೊಟ್ಟು ಪರಿಶೀಲಿಸಿದಾಗ, ಶಾಲೆಯ ಬಹುತೇಕ ಕೊಠಡಿಗಳಲ್ಲಿ ನೀರು ಸೋರುತ್ತಿರುವುದು ಕಂಡುಬಂದಿರುತ್ತದೆ. ಶಾಲೆಯಲ್ಲಿ 26 ಮಂದಿ ಬಾಲಕಿಯರು ಹಾಗೂ 74 ಮಂದಿ ಬಾಲಕರು ಒಟ್ಟಾಗಿ 100ವಿದ್ಯಾರ್ಥಿಗಳು 6 ನೇ ತರಗತಿಯಿಂದ 8 ತರಗತಿಯವರೆಗೆ ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ.

ಶಾಲೆಯನ್ನು ಪರಿಶೀಲಿಸುವ ಸಂಧರ್ಭದಲ್ಲಿ ಶಾಲೆಗೆ ಯಾವುದೇ ಆವರಣಗೋಡೆ ಹಾಗೂ ಭದ್ರತಾ ಸಿಬ್ಬಂದಿ ಕಂಡುಬಂದಿರುವುದಿಲ್ಲ. ಆದ್ದರಿಂದ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಭದ್ರತಾ ಹಿತ ದೃಷ್ಟಿಯಿಂದ ಕೂಡಲೇ ಶಾಲೆಗೆ ಆವರಣಗೋಡೆ ನಿರ್ಮಾಣ, ಭದ್ರತಾ ಸಿಬ್ಬಂದಿ ನೇಮಕ ಹಾಗೂ ಸೋರುತ್ತಿರುವ ಶಾಲಾ ಕಟ್ಟಡವನ್ನು ಸರಿಪಡಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಪತ್ರದ ಮೂಲಕ ವಿನಂತಿಸಿದ್ದಾರೆ.

Related posts

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!