July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

ಬೆಳ್ತಂಗಡಿ: ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ದ.ಕ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರು ಆವಾಸೀಯ ಶಾಲೆಗೆ ಬೇಟಿ ಕೊಟ್ಟು ಪರಿಶೀಲಿಸಿದಾಗ, ಶಾಲೆಯ ಬಹುತೇಕ ಕೊಠಡಿಗಳಲ್ಲಿ ನೀರು ಸೋರುತ್ತಿರುವುದು ಕಂಡುಬಂದಿರುತ್ತದೆ. ಶಾಲೆಯಲ್ಲಿ 26 ಮಂದಿ ಬಾಲಕಿಯರು ಹಾಗೂ 74 ಮಂದಿ ಬಾಲಕರು ಒಟ್ಟಾಗಿ 100ವಿದ್ಯಾರ್ಥಿಗಳು 6 ನೇ ತರಗತಿಯಿಂದ 8 ತರಗತಿಯವರೆಗೆ ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ.

ಶಾಲೆಯನ್ನು ಪರಿಶೀಲಿಸುವ ಸಂಧರ್ಭದಲ್ಲಿ ಶಾಲೆಗೆ ಯಾವುದೇ ಆವರಣಗೋಡೆ ಹಾಗೂ ಭದ್ರತಾ ಸಿಬ್ಬಂದಿ ಕಂಡುಬಂದಿರುವುದಿಲ್ಲ. ಆದ್ದರಿಂದ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಭದ್ರತಾ ಹಿತ ದೃಷ್ಟಿಯಿಂದ ಕೂಡಲೇ ಶಾಲೆಗೆ ಆವರಣಗೋಡೆ ನಿರ್ಮಾಣ, ಭದ್ರತಾ ಸಿಬ್ಬಂದಿ ನೇಮಕ ಹಾಗೂ ಸೋರುತ್ತಿರುವ ಶಾಲಾ ಕಟ್ಟಡವನ್ನು ಸರಿಪಡಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಪತ್ರದ ಮೂಲಕ ವಿನಂತಿಸಿದ್ದಾರೆ.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

Suddi Udaya
error: Content is protected !!