September 6, 2026
Uncategorized

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

ಬೆಳ್ತಂಗಡಿ : ಮನೆಯಲ್ಲಿ ಒಬ್ಬ ಜಂಟಿ ಯಾಗಿದ್ದಾಗ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನಾ ಸ್ಥಳಕ್ಕೆ ಇಂದು ಪಶ್ಚಿಮ ವಲಯ ಐಜಿಪಿ ಅಮೀತ್ ಸಿಂಗ್ ಭೇಟಿ ನೀಡಿ ಮಾಹಿತಿ ಪಡೆದರು.ಕೊಲೆ ಆರೋಪಿಗಳ ಪತ್ತೆಗಾಗಿ ಮೂರು ತಂಡ ರಚಿಸಲಾಗಿದೆ.ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ.ಕಾಂಪೌಂಡ್ ನ ನಿವೃತ್ತ ಶಿಕ್ಷಕ ಎಸ್.ಪಿ.ಬಾಲಕೃಷ್ಣ ಭಟ್ (83) ರನ್ನು ಆ. 20 ರಂದು ಮಧ್ಯಾಹ್ನದ ಬಳಿಕ ಮನೆಯಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳ ತಂಡ ಮನೆಯೊಳಗೆ ಬಂದು ದಾಳಿ ಮಾಡಿದ್ದು. ಈ ವೇಳೆ ತಪ್ಪಿಸಿಕೊಂಡು ಮನೆಯಿಂದ ಅಂಗಳಕ್ಕೆ ಬಂದಿದ್ರೂ ಹಂತಕರು ಕತ್ತಿಗೆ ಬಲವಾಗಿ ಕಡಿದು ಕೊಲೆ ಮಾಡಿ ಹೋಗಿದ್ದಾರೆ ಎನ್ನಲಾಗಿದೆ.

ಕೊಲೆಯಾದ ಬಾಲಕೃಷ್ಣ ಭಟ್ ಮನೆಗೆ ಆ.21 ರಂದು ಮಧ್ಯಾಹ್ನ ಪಶ್ಚಿಮ ವಲಯ ಐಜಿಪಿ ಅಮೀತ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೆಯವರಿಂದ ಹಾಗೂ ಪೊಲೀಸರಿಂದ ಮಾಹಿತಿ ಪಡೆದುಕೊಂಡರು.ಬಳಿಕ ತನಿಖಾ ತಂಡದ ಜೊತೆ ಐಜಿಪಿ ಚರ್ಚಿಸಿ ಕೊಲೆ ಪ್ರಕರಣ ಭೇದಿಸಲು ತಂಡಕ್ಕೆ ಮಾಹಿತಿ ನೀಡಿದರು‌‌.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತಪಟ್ಟ ಬಾಲಕೃಷ್ಣ ಭಟ್ ಕಿರಿಯ ಮಗ ಸುರೇಶ್ ಭಟ್ ಆ.20 ರಂದು ರಾತ್ರಿ ನೀಡಿದ ದೂರಿನಂತೆ ಬಿ.ಎನ್.ಎಸ್ 103 ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದ್ದು. ಕೊಲೆ ಆರೋಪಿಗಳ ಪತ್ತೆಗಾಗಿ ಮೂರು ತಂಡ ರಚಿಸಲಾಗಿದ್ದು. ಬಂಟ್ಬಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತಂಡ , ಧರ್ಮಸ್ಥಳ ಇಬ್ಬರು ಸಬ್ ಇನ್ಸ್ಪೆಕ್ಟರ್ ಗಳ ತಂಡ ಹಾಗೂ ಮತ್ತೊಂದು ತಂಡದಿಂದ ವಿವಿಧ ತಂಡಗಳನ್ನು ದ.ಕ.ಎಸ್ಪಿ ಯತೀಶ್.ಎನ್ ಮಾಡಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Related posts

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya
error: Content is protected !!