25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಕೊಲೆ ಪ್ರಕರಣ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡ ಬಂದು ತನಿಖೆ ಮಾಡಿದ್ದು. ಘಟನೆ ಬಗ್ಗೆ ದ.ಕ.ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ.ಕಾಂಪೌಂಡ್ ನ ನಿವೃತ್ತ ಶಿಕ್ಷಕನಾಗಿರುವ ಎಸ್.ಪಿ.ಬಾಲಕೃಷ್ಣ ಭಟ್(83) ಎಂಬವರು ಆ.20 ರಂದು ಮಧ್ಯಾಹ್ನದ ಬಳಿಕ ಮನೆಯ ಆಡುಗೆ ಕೊನೆಯಲ್ಲಿರುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಮನೆಯ ಅಂಗಳಕ್ಕೆ ಓಡಿ ಬಂದಿದ್ದು ಈ ವೇಳೆ ಕೂಡ ಕುತ್ತಿಗೆ, ಕೈಗೆ, ತಲೆಗೆ ದಾಳಿ ಮಾಡಿದ್ದು ಇದರಿಂದ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ ಹಿರಿಯ ಪುತ್ರ ಸುರೇಶ್ ಭಟ್ ಉಪ್ಪಿನಂಗಡಿಯಿಂದ 3 ಗಂಟೆಗೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು ಬಳಿಕ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಎಸ್ಪಿ ಮಾಹಿತಿ: ನಿವೃತ್ತ ಶಿಕ್ಷಕನ ಕೊಲೆಯಾದ ಬಗ್ಗೆ ವರದಿಯಾಗಿದ್ದು. ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದೇನೆ. ಹಾಗೂ ನಮ್ಮ ವಿವಿಧ ತಂಡ ಕೂಡ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಯಾಕೆ ಈ ಕೊಲೆಯಾಗಿದೆ ಎಂದು ಮಾಹಿತಿ ಕಲೆ ಹಾಕಲಾಗುತ್ತಿದೆ. ಅದಲ್ಲದೆ ಮನೆಯಲ್ಲಿ ಯಾವುದೇ ಚಿನ್ನಾಭರಣ ಕಳ್ಳತನವಾಗಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು. ತನಿಖೆ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು.

ಕೊಲೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌, ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್-1 ಕಿಶೋರ್.ಪಿ ಮತ್ತು ಸಬ್ ಇನ್ಸ್ಪೆಕ್ಟರ್-2 ಸಮರ್ಥ್.ಆರ್.ಗಾಣಿಗೇರ ಮತ್ತು ಸಿಬ್ಬಂದಿ,ಮಂಗಳೂರು ಬೆರಳಚ್ಚು ವಿಭಾಗದ ಡಿವೈಎಸ್ಪಿ ಗೌರೀಶ್ ಸಿಬ್ಬಂದಿ ಸಚಿನ್ ರೈ, ಉದಯ್ ,ಮಂಗಳೂರು ಎಫ್.ಎಸ್.ಎಲ್ ಸೋಕೋ ತಂಡದ ಅರ್ಪಿತಾ, ಮಂಗಳೂರು ಡಾಗ್‌ ಸ್ಕಾಡ್ ಮತ್ತು ತಂಡದ ಸಿಬ್ಬಂದಿ ಗಣೇಶ್, ಚಂದ್ರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!