22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಕೊಲೆ ಪ್ರಕರಣ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡ ಬಂದು ತನಿಖೆ ಮಾಡಿದ್ದು. ಘಟನೆ ಬಗ್ಗೆ ದ.ಕ.ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ.ಕಾಂಪೌಂಡ್ ನ ನಿವೃತ್ತ ಶಿಕ್ಷಕನಾಗಿರುವ ಎಸ್.ಪಿ.ಬಾಲಕೃಷ್ಣ ಭಟ್(83) ಎಂಬವರು ಆ.20 ರಂದು ಮಧ್ಯಾಹ್ನದ ಬಳಿಕ ಮನೆಯ ಆಡುಗೆ ಕೊನೆಯಲ್ಲಿರುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಮನೆಯ ಅಂಗಳಕ್ಕೆ ಓಡಿ ಬಂದಿದ್ದು ಈ ವೇಳೆ ಕೂಡ ಕುತ್ತಿಗೆ, ಕೈಗೆ, ತಲೆಗೆ ದಾಳಿ ಮಾಡಿದ್ದು ಇದರಿಂದ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ ಹಿರಿಯ ಪುತ್ರ ಸುರೇಶ್ ಭಟ್ ಉಪ್ಪಿನಂಗಡಿಯಿಂದ 3 ಗಂಟೆಗೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು ಬಳಿಕ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಎಸ್ಪಿ ಮಾಹಿತಿ: ನಿವೃತ್ತ ಶಿಕ್ಷಕನ ಕೊಲೆಯಾದ ಬಗ್ಗೆ ವರದಿಯಾಗಿದ್ದು. ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದೇನೆ. ಹಾಗೂ ನಮ್ಮ ವಿವಿಧ ತಂಡ ಕೂಡ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಯಾಕೆ ಈ ಕೊಲೆಯಾಗಿದೆ ಎಂದು ಮಾಹಿತಿ ಕಲೆ ಹಾಕಲಾಗುತ್ತಿದೆ. ಅದಲ್ಲದೆ ಮನೆಯಲ್ಲಿ ಯಾವುದೇ ಚಿನ್ನಾಭರಣ ಕಳ್ಳತನವಾಗಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು. ತನಿಖೆ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು.

ಕೊಲೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌, ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್-1 ಕಿಶೋರ್.ಪಿ ಮತ್ತು ಸಬ್ ಇನ್ಸ್ಪೆಕ್ಟರ್-2 ಸಮರ್ಥ್.ಆರ್.ಗಾಣಿಗೇರ ಮತ್ತು ಸಿಬ್ಬಂದಿ,ಮಂಗಳೂರು ಬೆರಳಚ್ಚು ವಿಭಾಗದ ಡಿವೈಎಸ್ಪಿ ಗೌರೀಶ್ ಸಿಬ್ಬಂದಿ ಸಚಿನ್ ರೈ, ಉದಯ್ ,ಮಂಗಳೂರು ಎಫ್.ಎಸ್.ಎಲ್ ಸೋಕೋ ತಂಡದ ಅರ್ಪಿತಾ, ಮಂಗಳೂರು ಡಾಗ್‌ ಸ್ಕಾಡ್ ಮತ್ತು ತಂಡದ ಸಿಬ್ಬಂದಿ ಗಣೇಶ್, ಚಂದ್ರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya
error: Content is protected !!